23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ತಾಲೂಕು ಆಶಾ ಕಾರ್ಯಕರ್ತರ ಸಭೆಯು ಸೆ.28ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಮಾತನಾಡಿ ಆಶಾ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಕೊರೋನ ಸಂದರ್ಭದಲ್ಲಿ ಬೀದಿಗಿಳಿದು ಜನರ ಸೇವೆ ಮಾಡಿದ್ದಾರೆ. ಆಶಾಕಾರ್ಯಕರ್ತೆಯರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು. ಮುಂದೆ ನಡೆಯುವಂತಹ ಹೋರಾಟಗಳಲ್ಲಿ ನಾವೆಲ್ಲರೂ ಒಟ್ಟಾದರೆ ಮಾತ್ರ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತದೆ ಎಂದರು.

ಈ ವೇಳೆ ಅ.26-27 ರಂದು ಮೈಸೂರಿನಲ್ಲಿ ನಡೆಯಲಿರುವ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನದ ಪೋಸ್ಟರ್ ನ್ನು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಎಐಯುಟಿಯುಸಿ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮೀ, ನಗರ ಪಂಚಾಯತ್ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಯೂನಿಯನ್ ಅಧ್ಯಕ್ಷೆ ಎಂ.ಎನ್. ಗುಲಾಬಿ ಸ್ವಾಗತಿಸಿ, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ ನಿರೂಪಿಸಿ, ಕಾರ್ಯದರ್ಶಿ ಕೇಶವತಿ ಧನ್ಯವಾದವಿತ್ತರು.

Related posts

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya
error: Content is protected !!