July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ತಾಲೂಕು ಆಶಾ ಕಾರ್ಯಕರ್ತರ ಸಭೆಯು ಸೆ.28ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಮಾತನಾಡಿ ಆಶಾ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಕೊರೋನ ಸಂದರ್ಭದಲ್ಲಿ ಬೀದಿಗಿಳಿದು ಜನರ ಸೇವೆ ಮಾಡಿದ್ದಾರೆ. ಆಶಾಕಾರ್ಯಕರ್ತೆಯರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು. ಮುಂದೆ ನಡೆಯುವಂತಹ ಹೋರಾಟಗಳಲ್ಲಿ ನಾವೆಲ್ಲರೂ ಒಟ್ಟಾದರೆ ಮಾತ್ರ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತದೆ ಎಂದರು.

ಈ ವೇಳೆ ಅ.26-27 ರಂದು ಮೈಸೂರಿನಲ್ಲಿ ನಡೆಯಲಿರುವ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನದ ಪೋಸ್ಟರ್ ನ್ನು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಎಐಯುಟಿಯುಸಿ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮೀ, ನಗರ ಪಂಚಾಯತ್ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಯೂನಿಯನ್ ಅಧ್ಯಕ್ಷೆ ಎಂ.ಎನ್. ಗುಲಾಬಿ ಸ್ವಾಗತಿಸಿ, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ ನಿರೂಪಿಸಿ, ಕಾರ್ಯದರ್ಶಿ ಕೇಶವತಿ ಧನ್ಯವಾದವಿತ್ತರು.

Related posts

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya
error: Content is protected !!