24.6 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya
error: Content is protected !!