30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya
error: Content is protected !!