25.5 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya
error: Content is protected !!