ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya
error: Content is protected !!