25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಉಜಿರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಇಂದ್ರಪ್ರಸ್ತ ಸಭಾಂಗಣ ಉಜಿರೆ ಇಲ್ಲಿ ಸೆ. 27 ರಂದು ನಡೆಯಿತು.


ಕಬಡ್ಡಿ ಪಂದ್ಯಾಟದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾI ಎಸ್ ಸತೀಶ್ಚಂದ್ರ ದೀಪ ಪ್ರಜ್ವಲಿಸುವುದರೊಂದಿಗೆ ಪಂದ್ಯಾಟವನ್ನು ಉದ್ಘಾಟಿಸಿದರು.
ಪಂದ್ಯಾಟದ ಮುಖ್ಯ ಅಭ್ಯಾಗತರು ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಮುರಳಿಧರ್ ನಾಯ್ಕ, ಇವರು ರಾಜ್ಯ ಮಟ್ಟದ ಕಬಡ್ಡಿ ಆಟಗಾರರು ಹಾಗೂ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳನ್ನು ಉದ್ದೇಶಿ ಮಾತಾನಾಡಿದರು.


ಪಂದ್ಯಾಟದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಪ್ರಮೋದ್ ಕುಮಾರ್ ವಹಿಸಿಕೊಂಡಿರುತ್ತಾರೆ.
ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಸುಧಾಕರ್ ಶೆಟ್ಟಿ, ದೈಹಿಕ ಶಿಕ್ಷಣ ಉಪನ್ಯಾಸಕರು ಶಾರದಾ ಪದವಿ ಪೂರ್ವ ಕಾಲೇಜು, ಮಂಗಳೂರು ಹಾಗೂ ಜಿಲ್ಲೆಯ ಕ್ರೀಡಾ ಸಂಯೋಜಕರು ಶಶಿಧರ ಮಾಣಿ ಹಾಗೂ ಕ್ರೀಡಾ ಸಂಘದ ಕಾರ್ಯದರ್ಶಿಗಳು ರಮೇಶ್ ಎಚ್ ಉಪಸ್ಥಿತರಿದ್ದರು.


ಕನ್ನಡ ಉಪನ್ಯಾಸಕ ಮಹಾವೀರ್ ಜೈನ್ ನಿರೂಪಿಸಿದರು. ಉಪ ಪ್ರಾಂಶುಪಾಲರು ರಾಜೇಶ್ ಕೆ ಸ್ವಾಗತಿಸಿ, ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ ಬಿ ಪೂಂಜ ವಂದಿಸಿದರು.

Related posts

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya
error: Content is protected !!