July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜರುಗಿದ ನಾಲ್ಕನೇ ಐ ಎಸ್ ಟಿ ಇ ರಾಜ್ಯಮಟ್ಟದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಮಾವೇಶ-2024 ಇದರಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಈ ಎರಡು ವಿಭಾಗಗಳಲ್ಲಿ ಪ್ರತ್ಯೇಕವಾಗಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ .


ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಮಲ್ಟಿಪರ್ಪಸ್ ಅಗ್ರಿ ಟ್ರಾಲಿಯನ್ನು ವಿನ್ಯಾಸಗೊಳಿಸಲಾಗಿದೆ. ಆಧುನಿಕ ಕೃಷಿ ಪದ್ಧತಿಗೆ ಅನುಕೂಲವಾಗುವಲ್ಲಿ ಇದು ಸಹಕಾರಿಯಾಗಿದೆ. ಈ ಟ್ರಾಲಿಯನ್ನು ಬೈಕ್ ಮತ್ತು ಓಮಿನಿ ಬಿಡಿಭಾಗಗಳನ್ನು ಬಳಸಿ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳಾದ ಸುಮಂತ್ ಎಸ್ ಕೋಟೆ, ಮನ್ವಿತ್ , ಎ ಅಮೀನ್ ಅಹ್ಮದ್ , ಚೇತನ್ ಎಂ , ಗುರುರಾಜ್ ಕೆ ಮತ್ತು ವಿನಯ್ ಬಿ ಪಿ ಈ ಪ್ರಾಜೆಕ್ಟ್ ತಂಡದ ಸದಸ್ಯರಾಗಿದ್ದಾರೆ.


ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗವು ಎಂ ಕ್ಯಾಮ್ ( ಸ್ಮಾರ್ಟ್ ಸೆಕ್ಯೂರಿಟಿ ಕ್ಯಾಮೆರಾ ) ಎಂಬ ಪ್ರಬಂಧ ಪ್ರಸ್ತುತಪಡಿಸಿದ್ದು, ಈ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಲಭಿಸಿದೆ. ಅಭಿಷೇಕ್ ಪ್ರಶಾಂತ್ ಮತ್ತು ರವಿಶಂಕರ್ ಪಾಟೀಲ್ ಈ ತಂಡದ ಸದಸ್ಯರಾಗಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ , ವ್ಯವಸ್ಥಾಪಕ ಚಂದ್ರನಾಥ್ ಜೈನ್, ವಿಭಾಗ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

Related posts

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಿಗೆ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

Suddi Udaya
error: Content is protected !!