37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ತಾಲೂಕು ಆಶಾ ಕಾರ್ಯಕರ್ತರ ಸಭೆಯು ಸೆ.28ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಮಾತನಾಡಿ ಆಶಾ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಕೊರೋನ ಸಂದರ್ಭದಲ್ಲಿ ಬೀದಿಗಿಳಿದು ಜನರ ಸೇವೆ ಮಾಡಿದ್ದಾರೆ. ಆಶಾಕಾರ್ಯಕರ್ತೆಯರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು. ಮುಂದೆ ನಡೆಯುವಂತಹ ಹೋರಾಟಗಳಲ್ಲಿ ನಾವೆಲ್ಲರೂ ಒಟ್ಟಾದರೆ ಮಾತ್ರ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತದೆ ಎಂದರು.

ಈ ವೇಳೆ ಅ.26-27 ರಂದು ಮೈಸೂರಿನಲ್ಲಿ ನಡೆಯಲಿರುವ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನದ ಪೋಸ್ಟರ್ ನ್ನು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಎಐಯುಟಿಯುಸಿ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮೀ, ನಗರ ಪಂಚಾಯತ್ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಯೂನಿಯನ್ ಅಧ್ಯಕ್ಷೆ ಎಂ.ಎನ್. ಗುಲಾಬಿ ಸ್ವಾಗತಿಸಿ, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ ನಿರೂಪಿಸಿ, ಕಾರ್ಯದರ್ಶಿ ಕೇಶವತಿ ಧನ್ಯವಾದವಿತ್ತರು.

Related posts

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya
error: Content is protected !!