22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ತಾಲೂಕು ಆಶಾ ಕಾರ್ಯಕರ್ತರ ಸಭೆಯು ಸೆ.28ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಮಾತನಾಡಿ ಆಶಾ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಕೊರೋನ ಸಂದರ್ಭದಲ್ಲಿ ಬೀದಿಗಿಳಿದು ಜನರ ಸೇವೆ ಮಾಡಿದ್ದಾರೆ. ಆಶಾಕಾರ್ಯಕರ್ತೆಯರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು. ಮುಂದೆ ನಡೆಯುವಂತಹ ಹೋರಾಟಗಳಲ್ಲಿ ನಾವೆಲ್ಲರೂ ಒಟ್ಟಾದರೆ ಮಾತ್ರ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತದೆ ಎಂದರು.

ಈ ವೇಳೆ ಅ.26-27 ರಂದು ಮೈಸೂರಿನಲ್ಲಿ ನಡೆಯಲಿರುವ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನದ ಪೋಸ್ಟರ್ ನ್ನು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಎಐಯುಟಿಯುಸಿ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮೀ, ನಗರ ಪಂಚಾಯತ್ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಯೂನಿಯನ್ ಅಧ್ಯಕ್ಷೆ ಎಂ.ಎನ್. ಗುಲಾಬಿ ಸ್ವಾಗತಿಸಿ, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ ನಿರೂಪಿಸಿ, ಕಾರ್ಯದರ್ಶಿ ಕೇಶವತಿ ಧನ್ಯವಾದವಿತ್ತರು.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!