25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ತಾಲೂಕು ಆಶಾ ಕಾರ್ಯಕರ್ತರ ಸಭೆಯು ಸೆ.28ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಮಾತನಾಡಿ ಆಶಾ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಕೊರೋನ ಸಂದರ್ಭದಲ್ಲಿ ಬೀದಿಗಿಳಿದು ಜನರ ಸೇವೆ ಮಾಡಿದ್ದಾರೆ. ಆಶಾಕಾರ್ಯಕರ್ತೆಯರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು. ಮುಂದೆ ನಡೆಯುವಂತಹ ಹೋರಾಟಗಳಲ್ಲಿ ನಾವೆಲ್ಲರೂ ಒಟ್ಟಾದರೆ ಮಾತ್ರ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತದೆ ಎಂದರು.

ಈ ವೇಳೆ ಅ.26-27 ರಂದು ಮೈಸೂರಿನಲ್ಲಿ ನಡೆಯಲಿರುವ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನದ ಪೋಸ್ಟರ್ ನ್ನು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಎಐಯುಟಿಯುಸಿ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮೀ, ನಗರ ಪಂಚಾಯತ್ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಯೂನಿಯನ್ ಅಧ್ಯಕ್ಷೆ ಎಂ.ಎನ್. ಗುಲಾಬಿ ಸ್ವಾಗತಿಸಿ, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ ನಿರೂಪಿಸಿ, ಕಾರ್ಯದರ್ಶಿ ಕೇಶವತಿ ಧನ್ಯವಾದವಿತ್ತರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya
error: Content is protected !!