September 6, 2026
ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಜಮಲಾಬಾದ್ (ಗಡಾಯಿ ಕಲ್ಲು) ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya
error: Content is protected !!