July 23, 2026
ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya
error: Content is protected !!