25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya
error: Content is protected !!