39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

ಬೆಳ್ತಂಗಡಿ: ಇಲ್ಲಿನ ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿಯನ್ನು ಸೆ.26,27,28 ರಂದು ನಡೆಸಲಾಯಿತು.

ಸೆ.26 ರಂದು ಮೇಲಂತಬೆಟ್ಟು ಮತ್ತು ಲಾಯಿಲ ಗ್ರಾಮದಲ್ಲಿರುವ 50 ಕಡು ಬಡಕುಟುಂಬಗಳಿಗೆ 12 ಬಗೆಯ ಆಹಾರ ಧ್ಯಾನಗಳನ್ನು ವಿತರಿಸಲಾಯಿತು.

ಸೆ.27ರಂದು ಕರ್ನೊಡಿ, ಕನ್ನಾಜೆ ಮತ್ತು ಮೇಲಂಬೆಟ್ಟು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬ್ಯಾಗ್ ಮತ್ತು ಇನ್ನಿತರ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಸೆ.28ರಂದು ಕರ್ನೋಡಿಯ ದ.ಕ ಜಿ.ಪಂ.ಉ.ಪ್ರಾ. ಶಾಲೆ ಕರ್ನೋಡಿ ಲಾಯಿಲ ಇಲ್ಲಿನ ಬಿಸಿಯೂಟ ತಯಾರಿಕ ಕಟ್ಟಡದ ಸೋರುತ್ತಿರುವ ಮೇಲ್ಛಾವಣಿಯನ್ನು ಸುಮಾರು ರೂ. 1ಲಕ್ಷ ವೆಚ್ಚದಲ್ಲಿ ಹೊಸ ಮೇಲ್ಛಾವಣಿಯನ್ನು ನಿರ್ಮಿಸಿ ಕೊಡಲಾಯಿತು.

ಕರ್ನೋಡಿ ಶಾಲೆಯ ಅಭಿವೃದ್ಧಿ ಕಾರ್ಯವನ್ನು ನಡೆಸುತ್ತಿರುವ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಆರ್.ಪಿ.ಸಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಿ.ಕೆ ಧನಂಜಯ್ ರಾವ್, ಹಾಗೂ ಸಂಘದ ಸದಸ್ಯರು ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

Related posts

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya
error: Content is protected !!