24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

ಬೆಳ್ತಂಗಡಿ: ಇಲ್ಲಿನ ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿಯನ್ನು ಸೆ.26,27,28 ರಂದು ನಡೆಸಲಾಯಿತು.

ಸೆ.26 ರಂದು ಮೇಲಂತಬೆಟ್ಟು ಮತ್ತು ಲಾಯಿಲ ಗ್ರಾಮದಲ್ಲಿರುವ 50 ಕಡು ಬಡಕುಟುಂಬಗಳಿಗೆ 12 ಬಗೆಯ ಆಹಾರ ಧ್ಯಾನಗಳನ್ನು ವಿತರಿಸಲಾಯಿತು.

ಸೆ.27ರಂದು ಕರ್ನೊಡಿ, ಕನ್ನಾಜೆ ಮತ್ತು ಮೇಲಂಬೆಟ್ಟು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬ್ಯಾಗ್ ಮತ್ತು ಇನ್ನಿತರ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಸೆ.28ರಂದು ಕರ್ನೋಡಿಯ ದ.ಕ ಜಿ.ಪಂ.ಉ.ಪ್ರಾ. ಶಾಲೆ ಕರ್ನೋಡಿ ಲಾಯಿಲ ಇಲ್ಲಿನ ಬಿಸಿಯೂಟ ತಯಾರಿಕ ಕಟ್ಟಡದ ಸೋರುತ್ತಿರುವ ಮೇಲ್ಛಾವಣಿಯನ್ನು ಸುಮಾರು ರೂ. 1ಲಕ್ಷ ವೆಚ್ಚದಲ್ಲಿ ಹೊಸ ಮೇಲ್ಛಾವಣಿಯನ್ನು ನಿರ್ಮಿಸಿ ಕೊಡಲಾಯಿತು.

ಕರ್ನೋಡಿ ಶಾಲೆಯ ಅಭಿವೃದ್ಧಿ ಕಾರ್ಯವನ್ನು ನಡೆಸುತ್ತಿರುವ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಆರ್.ಪಿ.ಸಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಿ.ಕೆ ಧನಂಜಯ್ ರಾವ್, ಹಾಗೂ ಸಂಘದ ಸದಸ್ಯರು ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!