September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

ಉಜಿರೆ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ ನಡೆಯಿತು.

ಕಾರ್ಯಕ್ರಮಕ್ಕೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿ ಶಂಕರ್ ರವರು ಭೇಟಿ ನೀಡಿ, ಮಹಿಳೆಯರ ಸಬಲೀಕರಣ ಕುರಿತಂತೆ ಬಂದ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು. ಅನುದಾನಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಆರ್ಥಿಕ ವರ್ಷ 2025-26 ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲಿದ್ದು, 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಾಮಗಾರಿ ಮಾಡುವವರು ಅರ್ಜಿ ನೀಡಬಹುದು. ಮಹಿಳೆಯ ಸಬಲಿಕರಣವಾಗುವ ನಿಟ್ಟಿನಲ್ಲಿಹೆಚ್ಚಿನ ಸಂಖ್ಯೆಯಲ್ಲಿ ಕಾಮಗಾರಿ ಬೇಡಿಕೆ ಬರುವಂತೆ ಗ್ರಾ. ಪಂ ವ್ಯಾಪ್ತಿಯಲ್ಲಿ ಎಲ್ಲ ಕಡೆ ಪ್ರಚಾರ ಮಾಡಬೇಕು ಎಂದರು.

ಉಜಿರೆ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿರವರು ಮಾತನಾಡಿ ಉದ್ಯೋಗ ಖಾತರಿ ಯೋಜನೆಯಲ್ಲಿ ಸಾಕಷ್ಟು ಸೌಲಭ್ಯಗಳಿವೆ. ಮಹಿಳೆಯರಿಗೆ ತಮ್ಮ ಜೀವನೋಪಾಯಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳನ್ನು ಮಾಡಿಕೊಂಡು ಸ್ವಾವಲಂಬನ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೊಯ್ಯುರು ಗ್ರಾ. ಪಂ ಅಭಿವೃದೊಧಿ ಅಧಿಕಾರಿ ಪ್ರಕಾಶ್ ಎಸ್, ಬೆಳಾಲು ಗ್ರಾಮ ಪಂಚಾಯತ್ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್, ಇಂದಬೆಟ್ಟು ಗ್ರಾ. ಪ ಕಾರ್ಯದರ್ಶಿ ಗಿರಿಯಪ್ಪ ಗೌಡ, ನಡ ಗ್ರಾ. ಪಂ ಕಾರ್ಯದರ್ಶಿ ಕಿರಣ್, ತಾಲೂಕು ತಾಂತ್ರಿಕ ಸಂಯೋಜಕರು(ಅ. ಇ) ಶ್ರೀಮತಿ ಪೂರ್ಣಿಮಾ ಎಂ. ಸಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶರಣ್ ರೖ, ಗೌತಮ್ , ಶ್ರೀಮತಿ ರೇಷ್ಮಾ ರಾಜ್,ಕ ತಾಂತ್ರಿಕ ಸಹಾಯಕರು (ಕೃ/ತೋ/ಅ) ಕು. ಪ್ರಾರ್ಥನ,ತಾಲೂಕು ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಬಿ. ಎಫ್. ಟಿಗಳಾದ ಶ್ರಿಮತಿ ಹೆಲನ್, ಶ್ರೀಮತಿ ವಸಂತಿ, ಪ್ರವೀಣ್, ಉಜಿರೆ ನಡ, ನಾವೂರು, ಇಂದಬೆಟ್ಟು, ಬಂದಾರು,ಮಿತ್ತಬಾಗಿಲು, ಲಾಯಿಲ, ಕೊಯ್ಯೂರು, ಬೆಳಾಲು ಗ್ರಾಮ ಪಂಚಾಯತಿಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು,ಎಮ್.ಬಿ. ಕೆ, ಎಲ್. ಸಿ. ಆರ್. ಪಿ, ಕೃಷಿ ಸಖಿ, ಪಶು ಸಖಿ, ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಯಾನಂದ ವಲಯ ಮೇಲ್ವಿಚಾರಕರು ಎನ್. ಆರ್. ಎಲ್. ಎಮ್ ತಾಲೂಕು ನಿರ್ವಹಣಾ ಘಟಕ ಇವರು ಸ್ವಾಗತಿಸಿ, ನಿರೂಪಿಸಿದರು.

Related posts

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya
error: Content is protected !!