ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜರುಗಿದ ನಾಲ್ಕನೇ ಐ ಎಸ್ ಟಿ ಇ ರಾಜ್ಯಮಟ್ಟದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಮಾವೇಶ-2024 ಇದರಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಈ ಎರಡು ವಿಭಾಗಗಳಲ್ಲಿ ಪ್ರತ್ಯೇಕವಾಗಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ .


ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಮಲ್ಟಿಪರ್ಪಸ್ ಅಗ್ರಿ ಟ್ರಾಲಿಯನ್ನು ವಿನ್ಯಾಸಗೊಳಿಸಲಾಗಿದೆ. ಆಧುನಿಕ ಕೃಷಿ ಪದ್ಧತಿಗೆ ಅನುಕೂಲವಾಗುವಲ್ಲಿ ಇದು ಸಹಕಾರಿಯಾಗಿದೆ. ಈ ಟ್ರಾಲಿಯನ್ನು ಬೈಕ್ ಮತ್ತು ಓಮಿನಿ ಬಿಡಿಭಾಗಗಳನ್ನು ಬಳಸಿ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳಾದ ಸುಮಂತ್ ಎಸ್ ಕೋಟೆ, ಮನ್ವಿತ್ , ಎ ಅಮೀನ್ ಅಹ್ಮದ್ , ಚೇತನ್ ಎಂ , ಗುರುರಾಜ್ ಕೆ ಮತ್ತು ವಿನಯ್ ಬಿ ಪಿ ಈ ಪ್ರಾಜೆಕ್ಟ್ ತಂಡದ ಸದಸ್ಯರಾಗಿದ್ದಾರೆ.


ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗವು ಎಂ ಕ್ಯಾಮ್ ( ಸ್ಮಾರ್ಟ್ ಸೆಕ್ಯೂರಿಟಿ ಕ್ಯಾಮೆರಾ ) ಎಂಬ ಪ್ರಬಂಧ ಪ್ರಸ್ತುತಪಡಿಸಿದ್ದು, ಈ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಲಭಿಸಿದೆ. ಅಭಿಷೇಕ್ ಪ್ರಶಾಂತ್ ಮತ್ತು ರವಿಶಂಕರ್ ಪಾಟೀಲ್ ಈ ತಂಡದ ಸದಸ್ಯರಾಗಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ , ವ್ಯವಸ್ಥಾಪಕ ಚಂದ್ರನಾಥ್ ಜೈನ್, ವಿಭಾಗ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

Related posts

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya
error: Content is protected !!