September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ತಾಲೂಕು ಆಶಾ ಕಾರ್ಯಕರ್ತರ ಸಭೆಯು ಸೆ.28ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಮಾತನಾಡಿ ಆಶಾ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಕೊರೋನ ಸಂದರ್ಭದಲ್ಲಿ ಬೀದಿಗಿಳಿದು ಜನರ ಸೇವೆ ಮಾಡಿದ್ದಾರೆ. ಆಶಾಕಾರ್ಯಕರ್ತೆಯರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು. ಮುಂದೆ ನಡೆಯುವಂತಹ ಹೋರಾಟಗಳಲ್ಲಿ ನಾವೆಲ್ಲರೂ ಒಟ್ಟಾದರೆ ಮಾತ್ರ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತದೆ ಎಂದರು.

ಈ ವೇಳೆ ಅ.26-27 ರಂದು ಮೈಸೂರಿನಲ್ಲಿ ನಡೆಯಲಿರುವ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನದ ಪೋಸ್ಟರ್ ನ್ನು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಎಐಯುಟಿಯುಸಿ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮೀ, ನಗರ ಪಂಚಾಯತ್ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಯೂನಿಯನ್ ಅಧ್ಯಕ್ಷೆ ಎಂ.ಎನ್. ಗುಲಾಬಿ ಸ್ವಾಗತಿಸಿ, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ ನಿರೂಪಿಸಿ, ಕಾರ್ಯದರ್ಶಿ ಕೇಶವತಿ ಧನ್ಯವಾದವಿತ್ತರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!