24.8 C
ಪುತ್ತೂರು, ಬೆಳ್ತಂಗಡಿ
April 1, 2025
ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya
error: Content is protected !!