25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!