ತಾಲೂಕು ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ”* ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ,ಮೇಕೆ/ಕುರಿ ಶೆಡ್‌, ಹಂದಿ ಶೆಡ್, ಕೋಳಿ ಶೆಡ್‌, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್‌, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗುಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್‌, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುವೆ(ಉಜಿರ್ ಕಣಿ) ರಚನೆ, ಡ್ರ್ಯಾಗನ್‌ ಫ್ರೂಟ್‌, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುಂಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:1. ಬಿಪಿಎಲ್‌ ಕಾರ್ಡ್‌ ಪ್ರತಿ 2. ಎಪಿಎಲ್‌ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ, 3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ, 4. ಆರ್‌ಟಿಸಿ ಪ್ರತಿ, 5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

Related posts

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!