April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

ಬೆಳ್ತಂಗಡಿ: ಇಲ್ಲಿನ ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿಯನ್ನು ಸೆ.26,27,28 ರಂದು ನಡೆಸಲಾಯಿತು.

ಸೆ.26 ರಂದು ಮೇಲಂತಬೆಟ್ಟು ಮತ್ತು ಲಾಯಿಲ ಗ್ರಾಮದಲ್ಲಿರುವ 50 ಕಡು ಬಡಕುಟುಂಬಗಳಿಗೆ 12 ಬಗೆಯ ಆಹಾರ ಧ್ಯಾನಗಳನ್ನು ವಿತರಿಸಲಾಯಿತು.

ಸೆ.27ರಂದು ಕರ್ನೊಡಿ, ಕನ್ನಾಜೆ ಮತ್ತು ಮೇಲಂಬೆಟ್ಟು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬ್ಯಾಗ್ ಮತ್ತು ಇನ್ನಿತರ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಸೆ.28ರಂದು ಕರ್ನೋಡಿಯ ದ.ಕ ಜಿ.ಪಂ.ಉ.ಪ್ರಾ. ಶಾಲೆ ಕರ್ನೋಡಿ ಲಾಯಿಲ ಇಲ್ಲಿನ ಬಿಸಿಯೂಟ ತಯಾರಿಕ ಕಟ್ಟಡದ ಸೋರುತ್ತಿರುವ ಮೇಲ್ಛಾವಣಿಯನ್ನು ಸುಮಾರು ರೂ. 1ಲಕ್ಷ ವೆಚ್ಚದಲ್ಲಿ ಹೊಸ ಮೇಲ್ಛಾವಣಿಯನ್ನು ನಿರ್ಮಿಸಿ ಕೊಡಲಾಯಿತು.

ಕರ್ನೋಡಿ ಶಾಲೆಯ ಅಭಿವೃದ್ಧಿ ಕಾರ್ಯವನ್ನು ನಡೆಸುತ್ತಿರುವ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಆರ್.ಪಿ.ಸಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಿ.ಕೆ ಧನಂಜಯ್ ರಾವ್, ಹಾಗೂ ಸಂಘದ ಸದಸ್ಯರು ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya
error: Content is protected !!