25.5 C
ಪುತ್ತೂರು, ಬೆಳ್ತಂಗಡಿ
July 23, 2026
ಕರಾವಳಿ

ಮುಂಡಾಜೆ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಕೆಸರ್ ಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಪರಶುರಾಮ ಫ್ರೆಂಡ್ಸ್ ಮೂಲಾರು ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕೃಷಿಕ ಚಂದ್ರಹಾಸ ಪಟವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಗದ್ದೆಗಳು ನಶಿಸುತ್ತಿರುವ ಪ್ರಸ್ತುತ ಸಮಯದಲ್ಲಿ ಗದ್ದೆಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದ ಭತ್ತದ ಕೃಷಿಗೆ ಪ್ರೋತ್ಸಾಹ ದೊರೆಯುತ್ತದೆ. ಊರಿನ ಅಭಿವೃದ್ಧಿಯಲ್ಲಿ ಸಂಘಟನೆಗಳು ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಪರಶುರಾಮ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣಪ್ಪ, ಪತ್ರಕರ್ತ ಅರವಿಂದ ಹೆಬ್ಬಾರ್, ಅಂಜಲಿ ಪಟವರ್ಧನ್ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಶೇಖರ ಮುಲಾರು ಸ್ವಾಗತಿಸಿ, ಕೇಶವ ಕಾರ್ಯಕ್ರಮ ನಿರೂಪಿಸಿದರು.
ಕೆಸರುಗದ್ದೆಯಲ್ಲಿ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ನಾನಾ ಆಟಗಳು ನಡೆದವು.

Related posts

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!