26.7 C
ಪುತ್ತೂರು, ಬೆಳ್ತಂಗಡಿ
June 8, 2026
ಕರಾವಳಿ

ಮುಂಡಾಜೆ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಕೆಸರ್ ಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಲ್ಲಾರ್ಯ ಗಣೇಶ ಪಟವರ್ಧನ್ ರವರ ಗದ್ದೆಯಲ್ಲಿ ಪರಶುರಾಮ ಫ್ರೆಂಡ್ಸ್ ಮೂಲಾರು ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕೃಷಿಕ ಚಂದ್ರಹಾಸ ಪಟವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಗದ್ದೆಗಳು ನಶಿಸುತ್ತಿರುವ ಪ್ರಸ್ತುತ ಸಮಯದಲ್ಲಿ ಗದ್ದೆಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದ ಭತ್ತದ ಕೃಷಿಗೆ ಪ್ರೋತ್ಸಾಹ ದೊರೆಯುತ್ತದೆ. ಊರಿನ ಅಭಿವೃದ್ಧಿಯಲ್ಲಿ ಸಂಘಟನೆಗಳು ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಪರಶುರಾಮ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣಪ್ಪ, ಪತ್ರಕರ್ತ ಅರವಿಂದ ಹೆಬ್ಬಾರ್, ಅಂಜಲಿ ಪಟವರ್ಧನ್ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಶೇಖರ ಮುಲಾರು ಸ್ವಾಗತಿಸಿ, ಕೇಶವ ಕಾರ್ಯಕ್ರಮ ನಿರೂಪಿಸಿದರು.
ಕೆಸರುಗದ್ದೆಯಲ್ಲಿ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ನಾನಾ ಆಟಗಳು ನಡೆದವು.

Related posts

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya
error: Content is protected !!