September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು ಪರಿಣಾಮ ಗೋಡೆ ಬಿರುಕು ಬಿಟ್ಟು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೇಸಪ್ಪ ಅವರು ಸಂಜೆ ಸುಮಾರು 3.45 ರಿಂದ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ವೇಳೆ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದು ಮನೆಗೆ ಬಂದು ನೋಡಿದಾಗ ಸಿಡಿಲು ಬಡಿದು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆಯಲ್ಲದೇ ಗೋಡೆಯಿಂದ ಕಿತ್ತು ಬಂದಿದೆ. ಅಲ್ಲಲ್ಲಿ ಗೋಡೆ ಬಿರುಕು ಬಿಟ್ಟಿದೆ. ಶೌಚಾಲಯದ ಗೋಡೆ ಸಂಪೂರ್ಣ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಮಕ್ಕಳನ್ನು ಕರೆ ತರಲು ನಾವು ಶಾಲೆಗೆ ಹೋಗಿದ್ದರಿಂದ ಮಕ್ಕಳಿಗೆ ಹಾಗೂ ನಮಗೆ ಏನು ತೊಂದರೆ ಅಗಿಲ್ಲ, ಸಿಡಿಲು ಬಡಿತದಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ.

ಈ ಬಗ್ಗೆ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

Related posts

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya
error: Content is protected !!