September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.28 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಉಜಿರೆಯಲ್ಲಿ ನಡೆದ “ಪಿನಾಕಲ್ 2024” ಸ್ಪರ್ಧೆಯಲ್ಲಿ ಪಾಲ್ಗೊಂಡು, ಸಮಗ್ರ ಚಾಂಪಿಯನ್‌ಶಿಪ್‌ ವಿಜೇತರಾಗಿದ್ದಾರೆ.

ಎಕ್ಸೆಲ್ ಪಿಯು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ ಜೈನ್ ಅವರು, ವಾಣಿಜ್ಯ ವಿದ್ಯಾರ್ಥಿಗಳ ಪ್ರಥಮ ವರ್ಷದ ಮೊದಲ ಪ್ರಯತ್ನದಲ್ಲಿಯೇ ಈ ಅದ್ಭುತ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಪ್ರಾಂಶುಪಾಲರಾದ ಡಾ. ನವೀನ್ ಕುಮಾರ ಮರಿಕೆ ಅವರು, ಈ ರೀತಿಯ ಮ್ಯಾನೇಜ್‌ಮೆಂಟ್ ಫೆಸ್ಟ್‌ಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಸಹಕಾರಿ ಎಂದು ತಿಳಿಸಿದರು.

ವಾಣಿಜ್ಯ ವಿಭಾಗದ ಡೀನ್‌ ಸಂತೋಷ್ ಕೆಕೆ , ಹಾಗೂ ವಿಭಾಗ ಮುಖ್ಯಸ್ಥರಾದ ಪ್ರಸನ್ನ ಭೋಜ ಅವರ ಮಾರ್ಗದರ್ಶನದಲ್ಲಿ, ವಾಣಿಜ್ಯ ವಿಭಾಗದ ಉಪನ್ಯಾಸಕರು ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ್ದರು.

“ಪಿನಾಕಲ್ 2024” ಸ್ಪರ್ಧೆಯಲ್ಲಿ ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉಜ್ವಲ ಸಾಧನೆ ಮಾಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದಿದ್ದಾರೆ.

ಪ್ರಥಮ ಸ್ಥಾನ ವಿಜೇತರಾದ ವಿಭಾಗಗಳು: ರಸ ಪ್ರಶ್ನೆ ಸ್ಪರ್ಧೆ: ಶ್ರೀವತ್ಸ, ಋತ್ವಿಕ್, ಮಾರ್ಕೆಟಿಂಗ್ ಸ್ಪರ್ಧೆ: ನಂದನ್, ಅಭಿನವ, ಮಾರ್ಕೆಟಿಂಗ್ ಸ್ಪರ್ಧೆ: ಅನಿಶಾ, ಮಿಸ್ಬಾ ಅಂಜುಮ್, ದ್ವಿತೀಯ ಸ್ಥಾನ ವಿಜೇತರಾದ ವಿಭಾಗಗಳು: ಇವೆಂಟ್ ಮ್ಯಾನೇಜ್‌ಮೆಂಟ್: ತನಯ್, ಭವೀಶ್,ನೃತ್ಯ ಸ್ಪರ್ಧೆ:ದಿಯಾ, ವಿದ್ಯಾ ಗೌರಿ, ಅಶಿತಾ, ದರ್ಶಿನಿ.

Related posts

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಕೆಸರ್ದ ಕಂಡೊಡು ಕುಶಲ್ದ ಗೊಬ್ಬುಲು

Suddi Udaya
error: Content is protected !!