September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya
error: Content is protected !!