July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya
error: Content is protected !!