30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya
error: Content is protected !!