27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

ವೇಣೂರು: ಕಾರ್ಕಳದ ತಾಲೂಕಿನ ನಲ್ಲೂರು ಪಾದೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ 5 ಮಂದಿ, ಮಿನಿ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದು 4 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಸೆ.30) ವರದಿಯಾಗಿದೆ.

ಬೈಕ್‌ನಲ್ಲಿ ಪತಿ, ಪತ್ನಿ ಹಾಗೂ 3 ಮಕ್ಕಳು ಬರುತ್ತಿದ್ದಾಗ ಪಾದೆಗುಡ್ಡೆ ಬಳಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಸುರೇಶ್‌ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್‌ (2 ವ) ಎಂದು ಗುರುತಿಸಲಾಗಿದೆ. ಸುರೇಶ್‌ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32 ವ) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಮಣೇಲು ಗಾಂಧಿನಗರ ನಿವಾಸಿ ಸೀತರಾಮ ಆಚಾರ್ಯ ರವರ ಕುಟುಂಬಿಕರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

Related posts

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya
error: Content is protected !!