July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

ಬೆಳ್ತಂಗಡಿ: ಜಲ ಸಂರಕ್ಷಣಾ ವಿಧಾನಗಳು ಮತ್ತು ಅದನ್ನು ಜನ ಸಾಮಾನ್ಯರಿಗೆ ತಲುಪಿಸುವ ಜಾಗೃತಿ, ಅಭಿಯಾನಗಳ ಮೂಲಕ ಮಳೆ ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಮತ್ತು ಬೋರ್ವೆಲ್‌ಗಳಿಗೆ ಮರುಪೂರಣ ಮಾಡುವಂತೆ ಪ್ರೇರಣೆ ನೀಡಿ, ಅಂತರ್ಜಲ ವೃದ್ಧಿಯಲ್ಲಿ ವಿಶೇಷ ಕೊಡುಗೆಯನ್ನು ನೀಡಿದ ಡೇವಿಡ್ ಜೈಮಿ ಕೊಕ್ಕಡ ರವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಅಲ್ಫೋನ್ಸ ಪುಣ್ಯಕ್ಷೇತ್ರ ನೆಲ್ಯಾಡಿಯಲ್ಲಿ ಸನ್ಮಾನಿಸಲಾಯಿತು.

ಅವರು ಅಳವಡಿಸಿರುವ ಆರು ಜಲ ಸಂರಕ್ಷಣಾ ವಿಧಾನಗಳು ಹಿಂದೆಯೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ವಿಶ್ವದಾಖಲೆಯಾಗಿ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈಗ ಇನ್ನೂ ಎರಡು ವಿಧಾನಗಳನ್ನು ಹೆಚ್ಚಿಸಿ ತಮ್ಮ ಕೃಷಿ ಭೂಮಿಯಲ್ಲಿ ಎಂಟು ವಿಧಾನಗಳನ್ನು ಅಳವಡಿಸಿದ್ದು ಅಷ್ಟೂ ವಿಧಾನಗಳು ನೋಬೆಲ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ವಿಶ್ವ ದಾಖಲೆ ಆಗಿರುತ್ತದೆ ಜಾಗತಿಕ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಯಲ್ಲಿನ ಸೇವೆಯನ್ನು ಧರ್ಮಗುರು ವಂ. ಫಾ. ಶಾಜಿ ಮಾಥ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಚರ್ಚಿನ ಟ್ರಸ್ಟಿಗಳಾದ ಜೋಬಿನ್, ಅಲ್ವಿನ್, ಶಿಬು, ಅಲೆಕ್ಸ್ ಸಂಡೆ ಸ್ಕೂಲ್‌ನ ರೊಯ್, ವಿದ್ಯಾರ್ಥಿ ಮುಖಂಡ ಆಲ್ಲೊ ಮತ್ತು ವಂ.ಸಿಸ್ಟರ್ ಎಲ್ಸಿಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!