September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

ಬೆಳ್ತಂಗಡಿ: ಜಲ ಸಂರಕ್ಷಣಾ ವಿಧಾನಗಳು ಮತ್ತು ಅದನ್ನು ಜನ ಸಾಮಾನ್ಯರಿಗೆ ತಲುಪಿಸುವ ಜಾಗೃತಿ, ಅಭಿಯಾನಗಳ ಮೂಲಕ ಮಳೆ ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಮತ್ತು ಬೋರ್ವೆಲ್‌ಗಳಿಗೆ ಮರುಪೂರಣ ಮಾಡುವಂತೆ ಪ್ರೇರಣೆ ನೀಡಿ, ಅಂತರ್ಜಲ ವೃದ್ಧಿಯಲ್ಲಿ ವಿಶೇಷ ಕೊಡುಗೆಯನ್ನು ನೀಡಿದ ಡೇವಿಡ್ ಜೈಮಿ ಕೊಕ್ಕಡ ರವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಅಲ್ಫೋನ್ಸ ಪುಣ್ಯಕ್ಷೇತ್ರ ನೆಲ್ಯಾಡಿಯಲ್ಲಿ ಸನ್ಮಾನಿಸಲಾಯಿತು.

ಅವರು ಅಳವಡಿಸಿರುವ ಆರು ಜಲ ಸಂರಕ್ಷಣಾ ವಿಧಾನಗಳು ಹಿಂದೆಯೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ವಿಶ್ವದಾಖಲೆಯಾಗಿ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈಗ ಇನ್ನೂ ಎರಡು ವಿಧಾನಗಳನ್ನು ಹೆಚ್ಚಿಸಿ ತಮ್ಮ ಕೃಷಿ ಭೂಮಿಯಲ್ಲಿ ಎಂಟು ವಿಧಾನಗಳನ್ನು ಅಳವಡಿಸಿದ್ದು ಅಷ್ಟೂ ವಿಧಾನಗಳು ನೋಬೆಲ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ವಿಶ್ವ ದಾಖಲೆ ಆಗಿರುತ್ತದೆ ಜಾಗತಿಕ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಯಲ್ಲಿನ ಸೇವೆಯನ್ನು ಧರ್ಮಗುರು ವಂ. ಫಾ. ಶಾಜಿ ಮಾಥ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಚರ್ಚಿನ ಟ್ರಸ್ಟಿಗಳಾದ ಜೋಬಿನ್, ಅಲ್ವಿನ್, ಶಿಬು, ಅಲೆಕ್ಸ್ ಸಂಡೆ ಸ್ಕೂಲ್‌ನ ರೊಯ್, ವಿದ್ಯಾರ್ಥಿ ಮುಖಂಡ ಆಲ್ಲೊ ಮತ್ತು ವಂ.ಸಿಸ್ಟರ್ ಎಲ್ಸಿಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!