ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆಯು ಸೆ.29ರಂದು ಯುವಕ ಮಂಡಲ ಮುಂಡಾಜೆ ಇದರ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಮಾತನಾಡುತ್ತಾ -ಜಾತಿ ಸಂಘಟನೆಗಳು ಒಟ್ಟಾಗಬೇಕು, ಆ ಮೂಲಕ ಹಿಂದೂ ಧರ್ಮವನ್ನು ಬಡಿದೆಬ್ಬಿಸಿ ನಾವೆಲ್ಲ ಒಂದಾಗಿ ಬದುಕುವುದನ್ನು ಕಲಿಯಬೇಕು -ಎಂಬುದಾಗಿ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಉಪಸ್ಥಿತರಿದ್ದು, ಸಂಘದ ಚಟುವಟಿಕೆಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಶೆಟ್ಟಿ ಅಗರಿ ಇವರು ವಹಿಸಿಕೊಂಡಿದ್ದರು.

ಉಜಿರೆ ವಲಯ ಬಂಟರ ಸಂಘದ ಅಧ್ಯಕ್ಷರಾದ ವನಿತಾ ವಿ ರೈ , ಪೂರ್ವ ಅಧ್ಯಕ್ಷರುಗಳು ಹಾಗೂ ಎಲ್ಲಾ ಪದಾಧಿಕಾರಿಗಳು, ಮುಂಡಾಜೆ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮುಂಡಾಜೆ ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ಅಗರಿ ಇವರು ಪುನರಾಯ್ಕೆಗೊಂಡರು. ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ನಾಗಂಡ ಮತ್ತು ಕೋಶಾಧಿಕಾರಿಯಾಗಿ ಮಧು ಶೆಟ್ಟಿ ಹುರ್ತಾಜೆ ಮತ್ತು ಇತರ ಪದಾಧಿಕಾರಿಗಳ ಆಯ್ಕೆ ನಡೆಯಿತು.

ವೇದಿಕೆಯಲ್ಲಿ ಸಂಜೀವ ಶೆಟ್ಟಿ ಕುಂಟಿನಿ , ಸುರೇಶ್ ಶೆಟ್ಟಿ ಲಾಯಿಲ, ಉಮೇಶ್ ಶೆಟ್ಟಿ ದುರ್ಗಾ ನಿಲಯ ಉಜಿರೆ, ವೆಂಕಟರಮಣ ಶೆಟ್ಟಿ ಕಲ್ಮಂಜ, ಸೀತಾರಾಮ ಶೆಟ್ಟಿ ಕೆಂಬಾರ್ಜೆ, ಜಯರಾಮ ಶೆಟ್ಟಿ ಕೆಂಬರ್ಜೆ, ಕಿರಣ್ ಕುಮಾರ್ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ ಕುಂಟಿನಿ, ಗೌರವಾಧ್ಯಕ್ಷರಾದ ರಾಮಣ್ಣ ಶೆಟ್ಟಿ ಅಗರಿ, ಸಂಚಾಲಕ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ ಇವರುಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಕಾರ್ಯದರ್ಶಿ ವಿಜಯಕುಮಾರ್ ರೈ ಸ್ವಾಗತಿಸಿ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಪ್ರಾರ್ಥಿಸಿದರು. ನವೀತ್ ಶೆಟ್ಟಿ ನಿರೂಪಿಸಿ, ಧನ್ಯವಾದಿಸಿದರು. ಮುಂಡಾಜೆ ಗ್ರಾಮ ಸಮಿತಿಯ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದರು.

Leave a Comment

error: Content is protected !!