ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಇಂದಬೆಟ್ಟು : ಇಂದಬೆಟ್ಟು ಜಂಕ್ಷನ್ ಬಳಿ ದೇವನಾರಿ ಶಾಲಾ 5ನೇ ತರಗತಿ ವಿದ್ಯಾರ್ಥಿ ಇಂದಬೆಟ್ಟು ಬೈರೋಟ್ಟು ವಿಶ್ವನಾಥರವರ ಪುತ್ರ ಪ್ರಣೀತ್ ರಸ್ತೆ ದಾಟುತ್ತಿದ್ದ ವೇಳೆ ಓಮಿನಿ ಕಾರ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಸೆ. 30ರಂದು ಸಂಜೆ ನಡೆದಿದೆ.

ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.

Leave a Comment

error: Content is protected !!