July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

ನೆರಿಯ: ಗಂಡಿಬಾಗಿಲು ಸಂತ ಥೋಮಸ್ ದೇವಾಲಯದಲ್ಲಿ, ಹಿರಿಯ ಸಮಾಜಸೇವಕರಾದ ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರಾಗಿರುವ ಚಾಂಡಿ ಅವರನ್ನು, ವೇದಿಕೆಯ ಹಿಂದೆ ಹಲವಾರು ಜನಾನುರಾಗಿ ಕಾರ್ಯಕ್ರಮಗಳ ಮೂಲಕ, ನೆರಿಯ-ಗಂಡಿಬಾಗಿಲು ಪ್ರದೇಶದಲ್ಲಿ ಮನೆ ಮಾತಾಗಿರುವ ಕಾರಣಕ್ಕಾಗಿ, ವಿನ್ಸೆಂಟ್ ಡಿ ಪೌಲ್ ದಿನದಂದು ಸನ್ಮಾನಿಸಲಾಯಿತು.

ಸಮಾಜ ಸೇವೆ ಮತ್ತು ಬಡವರ ಏಳಿಗೆಗಾಗಿ ಅವರು ನೀಡಿದ ಅನೇಕ ಸೇವೆಗಳನ್ನು, ಸ್ಥಳೀಯ ವಿನ್ಸೆಂಟ್ ಸೊಸೈಟಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ದಕ್ಷಿಣ ಕನ್ನಡ ಗ್ರಾಮೀಣಾಭಿವೃದ್ಧಿ ಸೊಸೈಟಿ (DKRDS), ಮತ್ತು ದೀರ್ಘಾವಧಿ ಕ್ರೆಡಿಟ್ ಯೂನಿಯನ್, ಗಂಡಿಬಾಗಿಲು ಇದರ ಅಧ್ಯಕ್ಷರಾಗಿ, ಚರ್ಚ್ ಪಾಲನಾ ಸಮಿತಿ ಸದಸ್ಯರಾಗಿ, ಟ್ರಸ್ಟಿಯಾಗಿಯೂ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಕೊಡುಗೆಗಳನ್ನು ಗೌರವಿಸಲಾಯಿತು.

ಚರ್ಚ್ ನ ಧರ್ಮ ಗುರು ವಂ. ಫಾ ಜೋಸ್, ಟ್ರಸ್ಟಿಗಳಾದ ಶಾಜಿ ಮಣ್ಣಿಯೇಕುಂನೆಲ್, ಶಿಜೋ ಕುರಿಯನ್ ಸೇಬಾಸ್ತಿಯನ್ ಎಂ ಜೆ ಮೊದಲಾದವರು ಉಪಸ್ಥಿತರಿದ್ದರು. ಸಂಡೆ ಸ್ಕೂಲ್ ಮುಖ್ಯೋಪಾಧ್ಯಾಯ ಶಿಜು ಸಿ ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya
error: Content is protected !!