25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

ನೆರಿಯ: ಗಂಡಿಬಾಗಿಲು ಸಂತ ಥೋಮಸ್ ದೇವಾಲಯದಲ್ಲಿ, ಹಿರಿಯ ಸಮಾಜಸೇವಕರಾದ ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರಾಗಿರುವ ಚಾಂಡಿ ಅವರನ್ನು, ವೇದಿಕೆಯ ಹಿಂದೆ ಹಲವಾರು ಜನಾನುರಾಗಿ ಕಾರ್ಯಕ್ರಮಗಳ ಮೂಲಕ, ನೆರಿಯ-ಗಂಡಿಬಾಗಿಲು ಪ್ರದೇಶದಲ್ಲಿ ಮನೆ ಮಾತಾಗಿರುವ ಕಾರಣಕ್ಕಾಗಿ, ವಿನ್ಸೆಂಟ್ ಡಿ ಪೌಲ್ ದಿನದಂದು ಸನ್ಮಾನಿಸಲಾಯಿತು.

ಸಮಾಜ ಸೇವೆ ಮತ್ತು ಬಡವರ ಏಳಿಗೆಗಾಗಿ ಅವರು ನೀಡಿದ ಅನೇಕ ಸೇವೆಗಳನ್ನು, ಸ್ಥಳೀಯ ವಿನ್ಸೆಂಟ್ ಸೊಸೈಟಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ದಕ್ಷಿಣ ಕನ್ನಡ ಗ್ರಾಮೀಣಾಭಿವೃದ್ಧಿ ಸೊಸೈಟಿ (DKRDS), ಮತ್ತು ದೀರ್ಘಾವಧಿ ಕ್ರೆಡಿಟ್ ಯೂನಿಯನ್, ಗಂಡಿಬಾಗಿಲು ಇದರ ಅಧ್ಯಕ್ಷರಾಗಿ, ಚರ್ಚ್ ಪಾಲನಾ ಸಮಿತಿ ಸದಸ್ಯರಾಗಿ, ಟ್ರಸ್ಟಿಯಾಗಿಯೂ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಕೊಡುಗೆಗಳನ್ನು ಗೌರವಿಸಲಾಯಿತು.

ಚರ್ಚ್ ನ ಧರ್ಮ ಗುರು ವಂ. ಫಾ ಜೋಸ್, ಟ್ರಸ್ಟಿಗಳಾದ ಶಾಜಿ ಮಣ್ಣಿಯೇಕುಂನೆಲ್, ಶಿಜೋ ಕುರಿಯನ್ ಸೇಬಾಸ್ತಿಯನ್ ಎಂ ಜೆ ಮೊದಲಾದವರು ಉಪಸ್ಥಿತರಿದ್ದರು. ಸಂಡೆ ಸ್ಕೂಲ್ ಮುಖ್ಯೋಪಾಧ್ಯಾಯ ಶಿಜು ಸಿ ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!