April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು ಪರಿಣಾಮ ಗೋಡೆ ಬಿರುಕು ಬಿಟ್ಟು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೇಸಪ್ಪ ಅವರು ಸಂಜೆ ಸುಮಾರು 3.45 ರಿಂದ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ವೇಳೆ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದು ಮನೆಗೆ ಬಂದು ನೋಡಿದಾಗ ಸಿಡಿಲು ಬಡಿದು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆಯಲ್ಲದೇ ಗೋಡೆಯಿಂದ ಕಿತ್ತು ಬಂದಿದೆ. ಅಲ್ಲಲ್ಲಿ ಗೋಡೆ ಬಿರುಕು ಬಿಟ್ಟಿದೆ. ಶೌಚಾಲಯದ ಗೋಡೆ ಸಂಪೂರ್ಣ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಮಕ್ಕಳನ್ನು ಕರೆ ತರಲು ನಾವು ಶಾಲೆಗೆ ಹೋಗಿದ್ದರಿಂದ ಮಕ್ಕಳಿಗೆ ಹಾಗೂ ನಮಗೆ ಏನು ತೊಂದರೆ ಅಗಿಲ್ಲ, ಸಿಡಿಲು ಬಡಿತದಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ.

ಈ ಬಗ್ಗೆ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

Related posts

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!