22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು ಪರಿಣಾಮ ಗೋಡೆ ಬಿರುಕು ಬಿಟ್ಟು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೇಸಪ್ಪ ಅವರು ಸಂಜೆ ಸುಮಾರು 3.45 ರಿಂದ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ವೇಳೆ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದು ಮನೆಗೆ ಬಂದು ನೋಡಿದಾಗ ಸಿಡಿಲು ಬಡಿದು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆಯಲ್ಲದೇ ಗೋಡೆಯಿಂದ ಕಿತ್ತು ಬಂದಿದೆ. ಅಲ್ಲಲ್ಲಿ ಗೋಡೆ ಬಿರುಕು ಬಿಟ್ಟಿದೆ. ಶೌಚಾಲಯದ ಗೋಡೆ ಸಂಪೂರ್ಣ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಮಕ್ಕಳನ್ನು ಕರೆ ತರಲು ನಾವು ಶಾಲೆಗೆ ಹೋಗಿದ್ದರಿಂದ ಮಕ್ಕಳಿಗೆ ಹಾಗೂ ನಮಗೆ ಏನು ತೊಂದರೆ ಅಗಿಲ್ಲ, ಸಿಡಿಲು ಬಡಿತದಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ.

ಈ ಬಗ್ಗೆ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

Related posts

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!