25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.28 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಉಜಿರೆಯಲ್ಲಿ ನಡೆದ “ಪಿನಾಕಲ್ 2024” ಸ್ಪರ್ಧೆಯಲ್ಲಿ ಪಾಲ್ಗೊಂಡು, ಸಮಗ್ರ ಚಾಂಪಿಯನ್‌ಶಿಪ್‌ ವಿಜೇತರಾಗಿದ್ದಾರೆ.

ಎಕ್ಸೆಲ್ ಪಿಯು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ ಜೈನ್ ಅವರು, ವಾಣಿಜ್ಯ ವಿದ್ಯಾರ್ಥಿಗಳ ಪ್ರಥಮ ವರ್ಷದ ಮೊದಲ ಪ್ರಯತ್ನದಲ್ಲಿಯೇ ಈ ಅದ್ಭುತ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಪ್ರಾಂಶುಪಾಲರಾದ ಡಾ. ನವೀನ್ ಕುಮಾರ ಮರಿಕೆ ಅವರು, ಈ ರೀತಿಯ ಮ್ಯಾನೇಜ್‌ಮೆಂಟ್ ಫೆಸ್ಟ್‌ಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಸಹಕಾರಿ ಎಂದು ತಿಳಿಸಿದರು.

ವಾಣಿಜ್ಯ ವಿಭಾಗದ ಡೀನ್‌ ಸಂತೋಷ್ ಕೆಕೆ , ಹಾಗೂ ವಿಭಾಗ ಮುಖ್ಯಸ್ಥರಾದ ಪ್ರಸನ್ನ ಭೋಜ ಅವರ ಮಾರ್ಗದರ್ಶನದಲ್ಲಿ, ವಾಣಿಜ್ಯ ವಿಭಾಗದ ಉಪನ್ಯಾಸಕರು ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ್ದರು.

“ಪಿನಾಕಲ್ 2024” ಸ್ಪರ್ಧೆಯಲ್ಲಿ ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉಜ್ವಲ ಸಾಧನೆ ಮಾಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದಿದ್ದಾರೆ.

ಪ್ರಥಮ ಸ್ಥಾನ ವಿಜೇತರಾದ ವಿಭಾಗಗಳು: ರಸ ಪ್ರಶ್ನೆ ಸ್ಪರ್ಧೆ: ಶ್ರೀವತ್ಸ, ಋತ್ವಿಕ್, ಮಾರ್ಕೆಟಿಂಗ್ ಸ್ಪರ್ಧೆ: ನಂದನ್, ಅಭಿನವ, ಮಾರ್ಕೆಟಿಂಗ್ ಸ್ಪರ್ಧೆ: ಅನಿಶಾ, ಮಿಸ್ಬಾ ಅಂಜುಮ್, ದ್ವಿತೀಯ ಸ್ಥಾನ ವಿಜೇತರಾದ ವಿಭಾಗಗಳು: ಇವೆಂಟ್ ಮ್ಯಾನೇಜ್‌ಮೆಂಟ್: ತನಯ್, ಭವೀಶ್,ನೃತ್ಯ ಸ್ಪರ್ಧೆ:ದಿಯಾ, ವಿದ್ಯಾ ಗೌರಿ, ಅಶಿತಾ, ದರ್ಶಿನಿ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya
error: Content is protected !!