September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ ಕಂಡಡ್ ಒಂಜಿದಿನ ಕ್ರೀಡಾಕೂಟ ಪೆರಾಲ್ದರಕಟ್ಟೆಯಲ್ಲಿ ಸೆ.29ರಂದು ನಡೆಯಿತು.

ಕ್ರೀಡಾಕೂಟದ ಅಧ್ಯಕ್ಷತೆಯನ್ನು ಬ್ರಾಂಚ್ ಅಧ್ಯಕ್ಷ ನವಾಝ್ ಮಂಜೊಟ್ಟಿ ವಹಿಸಿದ್ದರು. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿದರು.

ವಿಭಿನ್ನವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ತೆಂಕಕಾರಂದೂರು ಗ್ರಾಮದ ನಾಗರಿಕರಿಗೆ ರಸದೌತಣ ನೀಡುವಲ್ಲಿ ಯಶಸ್ವಿಯಾಯಿತು.

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಅವರು ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮದ ಅಗತ್ಯತೆಯನ್ನು ಮನವರಿಕೆ ಮಾಡಿದರು. ಗ್ರಾಮೀಣ ಭಾಗದ ಎಲ್ಲಾ ಯುವಕರು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವಂತೆ ಕರೆ ನೀಡಿದರು.

ಊರಿನ ಹಿರಿಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪುರುಷರು, ಮಕ್ಕಳಿಗೆ ಲಿಂಬೆ ಚಮಚ ಓಟ, ಒಂಟಿ ಕಾಲಿನ ಓಟ, ಹಾಳೆ ಓಟ, ಕೆಸರು ಗದ್ದೆ ಓಟ, ಹಗ್ಗಜಗ್ಗಾಟ ಈ ಮೊದಲಾದ ಗ್ರಾಮೀಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಯಸ್ಸಿನ ಮಿತಿಯನ್ನು ಲೆಕ್ಕಿಸದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಹಿರಿಯರು, ಕಿರಿಯರು ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದರು. ವಿಜೇತ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿ ರಫೀಕ್ ಜಿ. ಎ, ಕಾಸಿಂ ಕಟ್ಟೆ, ಹನೀಫ್ ಪುಂಜಾಲಕಟ್ಟೆ, ಅಬೂಬಕ್ಕರ್ ಮಂಜೊಟ್ಟಿ, ಅಶ್ಫಾಕ್ ಪುಂಜಾಲಕಟ್ಟೆ, ಮುಸ್ತಾಫ ಜಿ. ಕೆರೆ, ಕಮರುದ್ದಿನ್, ರಫೀಕ್ ಕನ್ನಡಿಕಟ್ಟೆ, ರಮೇಶ್ ಗಿಂಡಾಡಿ, ಅಶ್ರಫ್ ಬದ್ಯಾರು, ಶಮೀಮ್ ಕಟ್ಟೆ, ಪದ್ಮನಾಭ ಶೆಟ್ಟಿ, ರಾಮನಂದ ಪೂಜಾರಿ, ಅಶ್ರಫ್ ಕಟ್ಟೆ ಬ್ರಾಂಚ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಿಜಾಮ್ ಕಟ್ಟೆ ನಿರೂಪಿಸಿದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya
error: Content is protected !!