April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.97.82 ಫಲಿತಾಂಶ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya
error: Content is protected !!