23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya
error: Content is protected !!