25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

ವೇಣೂರು: ಕಾರ್ಕಳದ ತಾಲೂಕಿನ ನಲ್ಲೂರು ಪಾದೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ 5 ಮಂದಿ, ಮಿನಿ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದು 4 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಸೆ.30) ವರದಿಯಾಗಿದೆ.

ಬೈಕ್‌ನಲ್ಲಿ ಪತಿ, ಪತ್ನಿ ಹಾಗೂ 3 ಮಕ್ಕಳು ಬರುತ್ತಿದ್ದಾಗ ಪಾದೆಗುಡ್ಡೆ ಬಳಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಸುರೇಶ್‌ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್‌ (2 ವ) ಎಂದು ಗುರುತಿಸಲಾಗಿದೆ. ಸುರೇಶ್‌ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32 ವ) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಮಣೇಲು ಗಾಂಧಿನಗರ ನಿವಾಸಿ ಸೀತರಾಮ ಆಚಾರ್ಯ ರವರ ಕುಟುಂಬಿಕರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

Related posts

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ದೇಜಮ್ಮ ನಿಧನ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!