28.6 C
ಪುತ್ತೂರು, ಬೆಳ್ತಂಗಡಿ
March 31, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.

ರಾಜೇಂದ್ರರವರ ಮನೆ ಬಳಿ ಬಿದ್ದ ಸಿಡಿಲಿಂದ ನೆಲದಲ್ಲಿ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ತೆಂಗಿನ ಗಿಡಕ್ಕೂ ಹಾನಿಯಾಗಿದೆ. ಶೆಡ್ ನ ಸಿಮೆಂಟ್ ಶೀಟ್ ಹುಡಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ತೊಂದರೆಯಾಗಿಲ್ಲ. ಸಿಡಿಲಿನಿಂದ ಅಕ್ಕ ಪಕ್ಕದ ಮನೆಯವರಿಗೂ ಕಾಲಿಗೆ ಹೊಡೆದಂತ ಅನುಭವ ಆಗಿದೆ. ಸಿಡಿಲಿನಿಂದ ರಾಜೇಂದ್ರರವರಿಗೆ ಅಂದಾಜು ರೂ. 1ಲಕ್ಷದಷ್ಟು ನಷ್ಟ ಸಂಭವಿಸಿದೆ.

Related posts

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
error: Content is protected !!