23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

ಬೆಳ್ತಂಗಡಿ: ಜಲ ಸಂರಕ್ಷಣಾ ವಿಧಾನಗಳು ಮತ್ತು ಅದನ್ನು ಜನ ಸಾಮಾನ್ಯರಿಗೆ ತಲುಪಿಸುವ ಜಾಗೃತಿ, ಅಭಿಯಾನಗಳ ಮೂಲಕ ಮಳೆ ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಮತ್ತು ಬೋರ್ವೆಲ್‌ಗಳಿಗೆ ಮರುಪೂರಣ ಮಾಡುವಂತೆ ಪ್ರೇರಣೆ ನೀಡಿ, ಅಂತರ್ಜಲ ವೃದ್ಧಿಯಲ್ಲಿ ವಿಶೇಷ ಕೊಡುಗೆಯನ್ನು ನೀಡಿದ ಡೇವಿಡ್ ಜೈಮಿ ಕೊಕ್ಕಡ ರವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಅಲ್ಫೋನ್ಸ ಪುಣ್ಯಕ್ಷೇತ್ರ ನೆಲ್ಯಾಡಿಯಲ್ಲಿ ಸನ್ಮಾನಿಸಲಾಯಿತು.

ಅವರು ಅಳವಡಿಸಿರುವ ಆರು ಜಲ ಸಂರಕ್ಷಣಾ ವಿಧಾನಗಳು ಹಿಂದೆಯೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ವಿಶ್ವದಾಖಲೆಯಾಗಿ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈಗ ಇನ್ನೂ ಎರಡು ವಿಧಾನಗಳನ್ನು ಹೆಚ್ಚಿಸಿ ತಮ್ಮ ಕೃಷಿ ಭೂಮಿಯಲ್ಲಿ ಎಂಟು ವಿಧಾನಗಳನ್ನು ಅಳವಡಿಸಿದ್ದು ಅಷ್ಟೂ ವಿಧಾನಗಳು ನೋಬೆಲ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ವಿಶ್ವ ದಾಖಲೆ ಆಗಿರುತ್ತದೆ ಜಾಗತಿಕ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಯಲ್ಲಿನ ಸೇವೆಯನ್ನು ಧರ್ಮಗುರು ವಂ. ಫಾ. ಶಾಜಿ ಮಾಥ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಚರ್ಚಿನ ಟ್ರಸ್ಟಿಗಳಾದ ಜೋಬಿನ್, ಅಲ್ವಿನ್, ಶಿಬು, ಅಲೆಕ್ಸ್ ಸಂಡೆ ಸ್ಕೂಲ್‌ನ ರೊಯ್, ವಿದ್ಯಾರ್ಥಿ ಮುಖಂಡ ಆಲ್ಲೊ ಮತ್ತು ವಂ.ಸಿಸ್ಟರ್ ಎಲ್ಸಿಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya
error: Content is protected !!