September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

ಬೆಳ್ತಂಗಡಿ: ಜಲ ಸಂರಕ್ಷಣಾ ವಿಧಾನಗಳು ಮತ್ತು ಅದನ್ನು ಜನ ಸಾಮಾನ್ಯರಿಗೆ ತಲುಪಿಸುವ ಜಾಗೃತಿ, ಅಭಿಯಾನಗಳ ಮೂಲಕ ಮಳೆ ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಮತ್ತು ಬೋರ್ವೆಲ್‌ಗಳಿಗೆ ಮರುಪೂರಣ ಮಾಡುವಂತೆ ಪ್ರೇರಣೆ ನೀಡಿ, ಅಂತರ್ಜಲ ವೃದ್ಧಿಯಲ್ಲಿ ವಿಶೇಷ ಕೊಡುಗೆಯನ್ನು ನೀಡಿದ ಡೇವಿಡ್ ಜೈಮಿ ಕೊಕ್ಕಡ ರವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಅಲ್ಫೋನ್ಸ ಪುಣ್ಯಕ್ಷೇತ್ರ ನೆಲ್ಯಾಡಿಯಲ್ಲಿ ಸನ್ಮಾನಿಸಲಾಯಿತು.

ಅವರು ಅಳವಡಿಸಿರುವ ಆರು ಜಲ ಸಂರಕ್ಷಣಾ ವಿಧಾನಗಳು ಹಿಂದೆಯೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ವಿಶ್ವದಾಖಲೆಯಾಗಿ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈಗ ಇನ್ನೂ ಎರಡು ವಿಧಾನಗಳನ್ನು ಹೆಚ್ಚಿಸಿ ತಮ್ಮ ಕೃಷಿ ಭೂಮಿಯಲ್ಲಿ ಎಂಟು ವಿಧಾನಗಳನ್ನು ಅಳವಡಿಸಿದ್ದು ಅಷ್ಟೂ ವಿಧಾನಗಳು ನೋಬೆಲ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ವಿಶ್ವ ದಾಖಲೆ ಆಗಿರುತ್ತದೆ ಜಾಗತಿಕ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಯಲ್ಲಿನ ಸೇವೆಯನ್ನು ಧರ್ಮಗುರು ವಂ. ಫಾ. ಶಾಜಿ ಮಾಥ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಚರ್ಚಿನ ಟ್ರಸ್ಟಿಗಳಾದ ಜೋಬಿನ್, ಅಲ್ವಿನ್, ಶಿಬು, ಅಲೆಕ್ಸ್ ಸಂಡೆ ಸ್ಕೂಲ್‌ನ ರೊಯ್, ವಿದ್ಯಾರ್ಥಿ ಮುಖಂಡ ಆಲ್ಲೊ ಮತ್ತು ವಂ.ಸಿಸ್ಟರ್ ಎಲ್ಸಿಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!