25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

ಬೆಳ್ತಂಗಡಿ: ಜಲ ಸಂರಕ್ಷಣಾ ವಿಧಾನಗಳು ಮತ್ತು ಅದನ್ನು ಜನ ಸಾಮಾನ್ಯರಿಗೆ ತಲುಪಿಸುವ ಜಾಗೃತಿ, ಅಭಿಯಾನಗಳ ಮೂಲಕ ಮಳೆ ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಮತ್ತು ಬೋರ್ವೆಲ್‌ಗಳಿಗೆ ಮರುಪೂರಣ ಮಾಡುವಂತೆ ಪ್ರೇರಣೆ ನೀಡಿ, ಅಂತರ್ಜಲ ವೃದ್ಧಿಯಲ್ಲಿ ವಿಶೇಷ ಕೊಡುಗೆಯನ್ನು ನೀಡಿದ ಡೇವಿಡ್ ಜೈಮಿ ಕೊಕ್ಕಡ ರವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಅಲ್ಫೋನ್ಸ ಪುಣ್ಯಕ್ಷೇತ್ರ ನೆಲ್ಯಾಡಿಯಲ್ಲಿ ಸನ್ಮಾನಿಸಲಾಯಿತು.

ಅವರು ಅಳವಡಿಸಿರುವ ಆರು ಜಲ ಸಂರಕ್ಷಣಾ ವಿಧಾನಗಳು ಹಿಂದೆಯೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ವಿಶ್ವದಾಖಲೆಯಾಗಿ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈಗ ಇನ್ನೂ ಎರಡು ವಿಧಾನಗಳನ್ನು ಹೆಚ್ಚಿಸಿ ತಮ್ಮ ಕೃಷಿ ಭೂಮಿಯಲ್ಲಿ ಎಂಟು ವಿಧಾನಗಳನ್ನು ಅಳವಡಿಸಿದ್ದು ಅಷ್ಟೂ ವಿಧಾನಗಳು ನೋಬೆಲ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ವಿಶ್ವ ದಾಖಲೆ ಆಗಿರುತ್ತದೆ ಜಾಗತಿಕ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಯಲ್ಲಿನ ಸೇವೆಯನ್ನು ಧರ್ಮಗುರು ವಂ. ಫಾ. ಶಾಜಿ ಮಾಥ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಚರ್ಚಿನ ಟ್ರಸ್ಟಿಗಳಾದ ಜೋಬಿನ್, ಅಲ್ವಿನ್, ಶಿಬು, ಅಲೆಕ್ಸ್ ಸಂಡೆ ಸ್ಕೂಲ್‌ನ ರೊಯ್, ವಿದ್ಯಾರ್ಥಿ ಮುಖಂಡ ಆಲ್ಲೊ ಮತ್ತು ವಂ.ಸಿಸ್ಟರ್ ಎಲ್ಸಿಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya
error: Content is protected !!