27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ ಸೆ.29ರಂದು ರೋಟರಿ ಸೇವಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪೂರನ್ ವರ್ಮ ಅವರು ಉದ್ಘಾಟಿಸಿ ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಿಗಳ ಕಾರ್ಯ ಅಭಿನಂದನಾರ್ಹ ಹಾಗೂ ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎನ್.ಎಂ. ಜೋಸೆಫ್, ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ.ಮಲ್ಲಿಕಾರ್ಜುನ ಗೌಡ, ಸೌತ್ ಕೆನೆರಾ ಡಿಸ್ಟ್ರಿಕ್ಟ್ ಕೆಮಿಸ್ಟ್ ಎಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ನ ಅಧ್ಯಕ್ಷ ಅರುಣ್ ಶೆಟ್ಟಿ, ಕಾರ್ಯದರ್ಶಿ ಡಾ.ಎ.ಕೆ ಜಮಾಲ್, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶ್ರೀಧರ ಕೆ.ವಿ, ಕಾರ್ಯದರ್ಶಿ ಮಾಧವ ಗೌಡ, ಕೋಶಾಧಿಕಾರಿ ಗಣಪತಿ ಭಟ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿರಿಯ ಫಾರ್ಮಸಿಸ್ಟ್ ಮಡಂತ್ಯಾರ್ ನ ಮಹಾವೀರ ಮೆಡಿಕಲ್ಸ್ ನ ಉದಯಕುಮಾರ ಜೈನ್ ಹಾಗೂ ಹಿರಿಯ ಔಷಧಿ ವ್ಯಾಪಾರಿ ವೇಣೂರಿನ ಮಂಜುಶ್ರೀ ಮೆಡಿಕಲ್ಸ್ ನ ಶ್ರೀಮತಿ ಜಯಾ ಭಾರಧ್ವಜ್ ಅವರನ್ನು‌ ಸನ್ಮಾನಿಸಲಾಯಿತು.

ಅದೇ ರೀತಿ ಶ್ರೀನಿವಾಸ ಮೆಡಿಕಲ್‌ ಕಾಲೇಜಿನಲ್ಲಿ ಉನ್ನತ ಶ್ರೇಣಿಯಲ್ಲಿ ಎಂ.ಬಿ.ಬಿ.ಎಸ್ ಪದವಿ‌ ಪಡೆದ ಡಾ.ಮನೀಷಾ.ಎಂ ಅವರನ್ನು ಹಾಗೂ ಕಳೆದ 25 ವರ್ಷಗಳಿಂದ ಜವಾಬ್ದಾರಿಯುತವಾಗಿ ಎಲ್ಲಾ ಔಷಧಿ ಅಂಗಡಿಗಳಿಗೆ ಮಂಗಳೂರಿನಿಂದ ಔಷಧಿ ಸರಬರಾಜು ‌ಮಾಡುತ್ತಿರುವ ಶ್ರೀ ಕೇಶವ ಮೂರ್ತಿ ಇವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕಿನ 10 ಜನ ದೈಹಿಕ ಹಾಗೂ ಆರ್ಥಿಕ ಅಶಕ್ತರನ್ನು ಗುರುತಿಸಿ ಅವರಿಗೆ ಆರ್ಥಿಕ ನೆರವನ್ನು ನೀಡಲಾಯಿತು ಹಾಗೂ ಓರ್ವ ವ್ಯಕ್ತಿಗೆ ವೀಲ್ ಚೇರ್ ಒಂದನ್ನು ನೀಡಲಾಯಿತು.

ಶ್ರೀಮತಿ ಸುಜಾತ ಗಣಪತಿ ಭಟ್ ಪ್ರಾರ್ಥಿಸಿದರು. ಉದಯ ಕುಮಾರ ಜೈನ್ ಸ್ವಾಗತಿಸಿದರು. ಕಾರ್ಯದರ್ಶಿ ಮಾಧವ ಗೌಡ ಸಂಘದ ವರದಿಯನ್ನು ವಾಚಿಸಿದರು. ಸುಜಿತ್ ಭಿಡೆ ವಂದಿಸಿದರು.

Related posts

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya
error: Content is protected !!