July 23, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರ

ಬೆಳ್ತಂಗಡಿ: ತಾಲೂಕಿನ ಕೇಂದ್ರ ಶಾಲೆಯಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಸೆ.30ರಂದು (ಇಂದು) ನಡೆದ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು.

ತರಬೇತುದಾರರಾಗಿ ಜೇಸೀ ಚಂದ್ರಹಾಸ ಬಳಂಜ ಇವರು ವಿವಿಧ ಚಟುವಟಿಕೆಗಳು, ಸಮಸ್ಯೆಯ ಪರಿಹಾರದ ಮೂಲಕ,ಮಾಹಿತಿ ನೀಡಿದರು.

ಶಾಲಾ ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರಾದ ಚರಣ್ ಕುಮಾರ್ ಇವರು ಸ್ವಾಗತಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತುರಾಯ ಇವರು ವಂದಿಸಿದರು.ಚಂದ್ರಹಾಸ ಬಳಂಜರಿಗೆ
ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಶಾಲಾ ಶಿಕ್ಷಕ , ಶಿಕ್ಷಕಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!